ಧಾರವಾಡ: ಕಾರು ಪಲ್ಪಿ, ಇಬ್ಬರು ಸಾವು

ಹಳಿಯಾಳ-ಧಾರವಾಡ ರಸ್ತೆಯ ಹುಲಕೊಪ್ಪ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟು ಮತ್ತಿಬ್ಬರು...
ಅಪಘಾತ
ಅಪಘಾತ
Updated on

ಧಾರವಾಡ: ಹಳಿಯಾಳ-ಧಾರವಾಡ ರಸ್ತೆಯ ಹುಲಕೊಪ್ಪ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟು ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.

ಮೃತರು ಧಾರವಾಡದ ಮಿಶನ್ ಕಂಪೌಂಡನ ರಾಬಿನ್ ರವಿ ಪ್ರಭಾಕರ (19) ಮತ್ತು ಸ್ಟಿಫನ್ ಸ್ಯಾಮುವೆಲ್ ಬಲ್ಮಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ವಿಜಯ ಮತ್ತು ಹ್ಯಾವಸನ್ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಧಾರವಾಡದಿಂದ ಹಳಿಯಾಳಕ್ಕೆ ಎರ್ಟಿಗಾ ಕಾರಿನಲ್ಲಿ ಹೊರಟ ಸಂದರ್ಭದಲ್ಲಿ ಹುಲಕೊಪ್ಪ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಳ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com