ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಯಲ್ಲಾಪುರ ಬಳಿ ಮರಕ್ಕೆ ಕಾರು ಡಿಕ್ಕಿ: ನಿವೃತ್ತ ಐಎಎಸ್ ಅಧಿಕಾರಿ ಸೇರಿ 3 ಸಾವು

ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಐಎಎಸ್ ಅಧಿಕಾರಿ ಸೇರಿದಂತೆ ಒಂದೇ ಕುಟಂಬದ ಮೂವರು ಸ್ಥಳದಲ್ಲೇ...
ಯಲ್ಲಾಪುರ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಐಎಎಸ್ ಅಧಿಕಾರಿ ಸೇರಿದಂತೆ ಒಂದೇ ಕುಟಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರುವತ್ತಿ ಬಳಿ ನಡೆದಿದೆ.
ಯಲ್ಲಾಪುರದಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಹಾರಾಷ್ಟ್ರದ ನಿವೃತ್ತ ಐಎಎಸ್ ಅಧಿಕಾರಿ 64 ವರ್ಷದ ದತ್ತಾತ್ರೇಯ ಬನ್ಸೋಡ್ ಸೇರಿ ಮೂವರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com