ರಜನಿಕಾಂತ್ ಕಟೌಟ್ ಗೆ ಕ್ಷೀರಾಭಿಷೇಕ: ಸೂಪರ್ ಸ್ಟಾರ್ ಗೆ ಕೋರ್ಟ್ ನೋಟಿಸ್

ರಜನಿಕಾಂತ್​ರ ಹೊಸ ಸಿನಿಮಾ ಬಿಡುಗಡೆ ವೇಳೆಯಲ್ಲಿ ಅವರ ಕಟೌಟ್​ಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡುವ ಪದ್ಧತಿ ನಿಷೇಧಿಸುವ ಸಂಬಂಧ ಬೆಂಗಳೂರಿನ...
ರಜನಿಕಾಂತ್ ಕಟೌಟ್ ಗೆ ಹಾಲಿನ ಅಭಿಷೇಕ ಮಾಡುತ್ತಿರುವ ಅಭಿಮಾನಿಗಳು
ರಜನಿಕಾಂತ್ ಕಟೌಟ್ ಗೆ ಹಾಲಿನ ಅಭಿಷೇಕ ಮಾಡುತ್ತಿರುವ ಅಭಿಮಾನಿಗಳು
Updated on

ಬೆಂಗಳೂರು: ರಜನಿಕಾಂತ್​ರ ಹೊಸ ಸಿನಿಮಾ ಬಿಡುಗಡೆ ವೇಳೆಯಲ್ಲಿ ಅವರ ಕಟೌಟ್​ಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡುವ ಪದ್ಧತಿ ನಿಷೇಧಿಸುವ ಸಂಬಂಧ ಬೆಂಗಳೂರಿನ ಮೇಯೋ ಹಾಲ್ ಕೋರ್ಟ್  ರಜನಿ ಕಾಂತ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಸಾವಿರಾರು ಮಕ್ಕಳು ಅಪೌಷ್ಟಿಕತೆಯಿಂದ ಕೊನೆಯುಸಿರೆಳೆಯುತ್ತಿದ್ದಾರೆ. ಬಡತನದ ಬೇಗೆಯಲ್ಲಿ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗುತ್ತಿಲ್ಲ. ಇಂಥ ಪರಿಸ್ಥಿತಿಯಲ್ಲಿ ರಜನಿಕಾಂತ್ ಅಭಿಮಾನಿಗಳು ಸಾವಿರಾರು ಲೀಟರ್ ಹಾಲನ್ನು ಕಟೌಟ್​ಗೆ ಅಭಿಷೇಕ ಮಾಡಿ ವ್ಯರ್ಥ ಮಾಡುತ್ತಿದ್ದಾರೆ. ಆದ್ದರಿಂದ ಕಟೌಟ್​ಗೆ ಹಾಲಿನ ಅಭಿಷೇಕ ಮಾಡುವುದನ್ನು ನಿಷೇಧಿಸುವಂತೆ ಮನವಿ ಮಾಡಿ ಮಣಿವಣ್ಣನ್ ಎಂಬುವರು ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ನ್ಯಾಯಾಲಯ, ಪ್ರಕರಣದ ಬಗ್ಗೆ ರಜನಿಕಾಂತ್ ಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಏ. 11ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com