ವಕ್ಫ್ ಆಸ್ತಿ ಹಗರಣದ ಲೋಕಾಯುಕ್ತ ವರದಿಯನ್ನು ತಿರಸ್ಕರಿಸಿದ ಸರ್ಕಾರ

ವಕ್ಫ್ ಆಸ್ತಿ ಕಬಳಿಕೆ ಪ್ರಕರಣ ಸಂಬಂಧ ಉಪ ಲೋಕಾಯುಕ್ತರು ನೀಡಿದ್ದ ವರದಿಯನ್ನು ಕಾಂಗ್ರೆಸ್ ಸರ್ಕಾರ ತಿರಸ್ಕರಿಸಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ವಕ್ಫ್ ಆಸ್ತಿ ಕಬಳಿಕೆ ಪ್ರಕರಣ ಸಂಬಂಧ ಉಪ ಲೋಕಾಯುಕ್ತರು ನೀಡಿದ್ದ ವರದಿಯನ್ನು ಕಾಂಗ್ರೆಸ್ ಸರ್ಕಾರ ತಿರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ. 
ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ವೇಳೆ ಅನ್ವರ್ ಮಾಣಿಪ್ಪಾಡಿ ನೀಡಿದ್ದ ವಕ್ಫ್ ಆಶ್ತಿ ಕಬಳಿಕೆ ಪ್ರಕರಣದ ವರದಿ ಪರಿಶೀಲನೆ ನಡೆಸುವಂತೆ ಹಿಂದಿನ ಬಿಜೆಪಿ ಸರ್ಕಾರ ಮಾಡಿದ್ದ ಶಿಫಾರಸ್ಸಿನಂತ ಉಪ ಲೋಕಾಯುಕ್ತರು ವರದಿ ಪರಿಶೀಲಿಸಿ ತನಿಖೆ ಪೂರ್ಣಗೊಳಿಸಿದ್ದರು. ಇದರ 17 ಪುಟಗಳ ವರದಿಯನ್ನು ಲೋಕಾಯುಕ್ತವು ಮಾರ್ಚ್ 28ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಲಾಗಿತ್ತು. 
ಉಪಲೋಕಾಯುಕ್ತ ಆನಂದ್ ಅವರು ನೀಡಿರುವ ವಕ್ಫ್ ಆಸ್ತಿ ಹಗರಣದಲ್ಲಿ ಅನೇಕ ಹಿರಿಯ ಕಾಂಗ್ಸೆಸ್ ನಾಯಕರು ಮತ್ತು ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆಂದು ಹೆಸರಿಸಲಾಗಿದೆ. ಇವರನ್ನು ರಕ್ಷಿಸುವ ಉದ್ದೇಶದಿಂದ ಕಾಂಗ್ರೆಸ್ ಲೋಕಾಯುಕ್ತ ವರದಿಯನ್ನು ತಿರಸ್ಕರಿಸಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com