ಕಳೆದ ಏಪ್ರಿಲ್ 22ರಿಂದ 27ರವರೆಗೆ ಡಾ. ಸನತ್ಕುಮಾರ್ ಅವರ ಅಡಿಕೆ ಕಣದಲ್ಲಿ ಈ ಸೋಮಯಾಗ ನಡೆದಿದ್ದು, ಮೇಕೆಗಳನ್ನು ಬಲಿ ನೀಡಿ, ಅದರ ಮಾಂಸ ಹಾಗೂ ಸೋಮರಸವನ್ನು ಪ್ರಸಾದವಾಗಿ ನೀಡಲಾಗಿದೆ ಎಂಬ ಆರೋಪಗಳು ಕೇಳಿ ಬಿಂದಿವೆ. ಇದಕ್ಕೆ ಪೂರಕವಾಗಿ ಪ್ರಾಣಿ ಬಲಿ ನೀಡಿರುವ ವೀಡಿಯೋ ತುಣುಕು ಈಗ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ. ಅಗ್ನಿಯಲ್ಲಿ ಬೆಂದಿರುವ ಮಾಂಸವನ್ನು ಪ್ರಸಾದದ ರೂಪದಲ್ಲಿ ಸೇವಿಸಲಾಗಿದೆ ಎನ್ನುವುದು ಚರ್ಚೆಗೆ ಮತ್ತೊಂದು ಕಾರಣವಾಗಿದೆ.