ತೆರಿಗೆ ಅಧಿಕಾರಿಗಳಿಂದ ಸಿಎಂ ಆಪ್ತ ಕೆಂಪಯ್ಯ ವಿಚಾರಣೆ

ನಿವೃತ್ತ ಐಪಿಎಸ್‌ ಅಧಿಕಾರಿ ಹಾಗೂ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರನ್ನು ಬುಧವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ...
ಕೆಂಪಯ್ಯ
ಕೆಂಪಯ್ಯ
Updated on

ಬೆಂಗಳೂರು: ನಿವೃತ್ತ ಐಪಿಎಸ್‌ ಅಧಿಕಾರಿ  ಹಾಗೂ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರನ್ನು ಬುಧವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

ಈ ಹಿಂದೆ ಮೂವರು ವಿಧಾನಪರಿಷತ್‌ ಸದಸ್ಯರ ನಿವಾಸಗಳ ಮೇಲೆ ನಡೆದಿದ್ದ ಆದಾಯ ತೆರಿಗೆ ಇಲಾಖೆ ದಾಳಿ ಸಂದರ್ಭದಲ್ಲಿ ದೊರೆತಿದ್ದ ಡೈರಿಯಲ್ಲಿನ ಮಾಹಿತಿ ಆಧಾರದಲ್ಲಿ ಈ ವಿಚಾರಣೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ವಿಧಾನಪರಿಷತ್‌ ಸದಸ್ಯರ ನಿವಾಸಗಳ ಮೇಲೆ ನಡೆದಿದ್ದ ದಾಳಿ ಸಂದರ್ಭದಲ್ಲಿ ದೊರೆತ ಡೈರಿಯಲ್ಲಿ ಕೆಂಪಯ್ಯ ಅವರ ಹೆಸರು ಉಲ್ಲೇಖವಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಏಪ್ರಿಲ್‌ 27ರಂದು ಕೆಂಪಯ್ಯ ಅವರಿಗೆ ನೋಟಿಸ್‌ ಜಾರಿ ಮಾಡಲಾಗಿತ್ತು. ಅದರಂತೆ ಕೆಂಪಯ್ಯ ಅವರು ಬುಧವಾರ ಸಂಜೆ 5.10 ಕ್ಕೆ ನಗರದಲ್ಲಿರುವ ಆದಾಯ ತೆರಿಗೆ ಕಚೇರಿಗೆ ಆಗಮಿಸಿ ರಾತ್ರಿ 9 ಗಂಟೆವರೆಗೆ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದರು ಎಂದು ಹೇಳಲಾಗಿದೆ.

ವಿಧಾನಪರಿಷತ್‌ ಸದಸ್ಯರು ಕೆಂಪಯ್ಯ ಅವರೊಂದಿಗೆ ಸಂಭಾಷಣೆ ನಡೆಸಿರುವುದು ದೂರವಾಣಿ ಕರೆಗಳ ಲಿಸ್ಟ್‌ನಲ್ಲಿ ಪತ್ತೆಯಾಗಿದೆ. ಹೀಗಾಗಿ, ಅವರೊಂದಿಗಿನ ಸಂಪರ್ಕದ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆದರು ಎಂದು ಹೇಳಲಾಗಿದೆ.

ಇನ್ನು ಈ ಸಂಬಂಧ ಪ್ರತಿಕ್ರಿಯಿಸಿರುವ ಕೆಂಪಯ್ಯ, ನಾನು ಯಾವುದೇ ತಪ್ಪು ಮಾಡಿಲ್ಲ, ಕೆಲ ಮಾಧ್ಯಮಗಳು ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿವೆ ಎಂದು ಕಿಡಿ ಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com