ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಅರುಣ್ ಕುಮಾರ್ ನೇಮಕ

ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಧಾರವಾಡ ವಿಭಾಗೀಯ ಪ್ರಚಾರಕ ಅರುಣ್ ಕುಮಾರ್ ನೇಮಕಗೊಂಡಿದ್ದಾರೆ.
ಬಿಜೆಪಿ
ಬಿಜೆಪಿ
Updated on

ಬೆಂಗಳೂರು: ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಧಾರವಾಡ ವಿಭಾಗೀಯ ಪ್ರಚಾರಕ ಅರುಣ್ ಕುಮಾರ್ ನೇಮಕಗೊಂಡಿದ್ದಾರೆ.
ಈ ಹಿಂದೆ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿದ್ದ ಸಂತೋಷ್ ಅವರನ್ನು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಹುದ್ದೆ ತೆರವುಗೊಂಡಿತ್ತು. ಈ ಹಿನ್ನೆಲೆಯಲ್ಲಿ ಈಗ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಗೆ ಅರುಣ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಆರ್ ಎಸ್ಎಸ್ ಹಾಗೂ ಬಿಜೆಪಿ ಪಕ್ಷದ ನಡುವೆ ಸಮನ್ವಯ ಸೇತುವೆಯಾಗಿ ಕೆಲಸ ಮಾಡುವ ಸಂಘಟನಾ ಕಾರ್ಯದರ್ಶಿ ಹುದ್ದೆ ಮಹತ್ವದ್ದಾಗಿದೆ. 2014 ರಿಂದಲೂ ರಾಜ್ಯ ಸಂಘಟನಾ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಾತಿ ಕಸರತ್ತು ನಡೆಯುತ್ತಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com