ತೆರಿಗೆ ಹೆಚ್ಚಳವನ್ನು ವಾಪಸ್ ಪಡೆಯುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಪದ್ಮನಾಭ ರಡ್ಡಿ ಎಚ್ಚರಿಸಿದರು. ಆದರೆ ಇದಕ್ಕೆ ಜಗ್ಗದ ಮೇಯರ್ ಮಂಜುನಾಥ್ ರೆಡ್ಡಿ ಅವರು, ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ತೆಗೆದುಕೊಂಡ ನಿರ್ಧಾರ ಇದು, ನಿಮ್ಮ ಕಾಲದ ಕೂಸು ಇದು ಎಂದು ತಿರುಗೇಟು ನೀಡಿದರು.