ಎಂಆರ್ ಪಿಎಲ್ ಗೆ ಕೃಷಿ ಭೂಮಿ ಮಂಜೂರು: ಪೇಜಾವರ ಶ್ರೀಗಳಿಂದ ತೀವ್ರ ವಿರೋಧ

ಎಂ ಆರ್ ಪಿಎಲ್ ನ ನಾಲ್ಕನೇ ಹಂತದ ವಿಸ್ತರಣೆಗಾಗಿ ರಾಜ್ಯ ಸರ್ಕಾರ 3 ,000 ಎಕರೆಯಷ್ಟು ಭೂಮಿ ನೀಡುವುದಲು ಮುಂದಾಗಿರುವುದನ್ನು ವಿಶ್ವೇಶ ತೀರ್ಥ ಸ್ವಾಮಿಗಳು ವಿರೋಧಿಸಿದ್ದಾರೆ.
ಪೇಜಾವರ ಶ್ರೀ
ಪೇಜಾವರ ಶ್ರೀ
Updated on

ಉಡುಪಿ: ಮಂಗಳೂರಿನಲ್ಲಿ ಎಂ ಆರ್ ಪಿಎಲ್ ನ ನಾಲ್ಕನೇ ಹಂತದ ವಿಸ್ತರಣೆಗಾಗಿ ರಾಜ್ಯ ಸರ್ಕಾರ 3 ,000 ಎಕರೆಯಷ್ಟು ಭೂಮಿ ನೀಡುವುದಲು ಮುಂದಾಗಿರುವುದನ್ನು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮಿಗಳು ವಿರೋಧಿಸಿದ್ದಾರೆ.
ಪೇಜಾವರದ ಶ್ರೀ ಕೃಷ್ಣಾ ಮಠದ ಆವರಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಪೇಜಾವರ ಸ್ವಾಮೀಜಿ, " ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದ ಕೈಗಾರಿಕಾ ಸಚಿವ ಆರ್ ವಿ ದೇಶಪಾಂಡೆ ಎಂಆರ್ ಪಿಎಲ್ ( ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್) ನ ವಿಸ್ತರಣೆಗಾಗಿ  3 ಸಾವಿರ ಎಕರೆಯಷ್ಟು ಕೃಷಿ ಭೂಮಿಯನ್ನು ಮಂಜೂರು ಮಾಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಇದಕ್ಕೆ ತಮ್ಮ ವಿರೋಧವಿದೆ ಎಂದು ತಿಳಿಸಿದ್ದಾರೆ. 
ರಾಜ್ಯ ಸರ್ಕಾರ ತಕ್ಷಣವೇ ತನ್ನ ನಿರ್ಧಾರವನ್ನು ವಾಪಸ್ ಪಡೆಯಬೇಕು. ಕಳೆದ ಎರಡು ವರ್ಷಗಳ ಹಿಂದೆಯೂ ಎಂಆರ್ ಪಿಎಲ್ ನ ವಿಸ್ತರಣೆಗಾಗಿ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಆಗಲೂ ವಿರೋಧ ವ್ಯಕ್ತಪಡಿಸಿದ್ದಾಗಿ ಪೇಜಾವರ ಶ್ರೀಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com