ಶನಿವಾರ ಚಿನ್ನಸ್ವಾಮಿ ಕ್ರೀಡಾ೦ಗಣದಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪ೦ದ್ಯ ವೀಕ್ಷಿಸಿ ಕ೦ಠಪೂರ್ತಿ ಕುಡಿದ ರಾತ್ರಿ 11.10ರಲ್ಲಿ ಜಿ.ಎ೦.ಪಾಳ್ಯ ಮುಖ್ಯರಸ್ತೆಯಲ್ಲಿ ವಿರುದ್ಧ ದಿಕ್ಕಿನಿ೦ದ ಕಾರಿನಲ್ಲಿ ನುಗ್ಗಿದ ಸಾಮ್ರಾಟ್ ಮತ್ತೊ೦ದು ಕಾರನ್ನು ಹಿಂದಿಕ್ಕುವ ಭರದಲ್ಲಿ ಎದುರಿಗೆ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದಾರೆ. ಆಗ ಆಟೋದಲ್ಲಿದ್ದ ನಾಲ್ವರಿಗೆ ಗಾಯವಾಗಿದ್ದು, ಆಟೋ ಸಂಪೂರ್ಣ ಜಖಂ ಆಗಿದೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯರ ಸಹಾಯದಿಂದ ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.