ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ದ ನಿರ್ದೇಶಕ ಹುದ್ದಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡಿಎ ಆಯುಕ್ತ ಶ್ಯಾಮ್ ಭಟ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ.
ರಾಜ್ಯಪಾಲರಿಗೆ ಶ್ಯಾಮ್ ಭಟ್ ಅವರ ಹೆಸರನ್ನು ಶಿಫಾರಸ್ಸು ಮಾಡಲಾಗಿದ್ದು, ಕೆಪಿಎಸ್ ಸಿ ನಿರ್ದೇಶಕರಾಗಿ ಟಿ ಶ್ಯಾಮ್ ಭಟ್ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ. ಕೆಐಎಡಿಬಿ, ಮುಜರಾಯಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿದ್ದ ಶ್ಯಾಮ್ ಭಟ್ ಪ್ರಸ್ತುತ ಬಿಡಿಎ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಶ್ಯಾಮ್ ಭಟ್ ಅವರಿಗೆ ಐಎಎಸ್ ಅಧಿಕಾರಿಯಾಗಿ ಬಡ್ತಿ ನೀಡಿ ಕೆಪಿಎಸ್ ಸಿ ಅಧ್ಯಕ್ಷರಾಗಿ ನೇಮಕ ಮಾಡುವ ಸಾಧ್ಯತೆಗಳಿವೆ.
Advertisement