ಮುಖ್ಯಮಂತ್ರಿ ಪರಿಹಾರ ನಿಧಿ ಬಿಡುಗಡೆಗಾಗಿ ಶಿಫಾರಸು ಮಾಡಿರುವ ಹಲವಾರು ಸಚಿವರಿಗೆ ಸಿಐಡಿ ನೋಟೀಸ್ ನೀಡಲು ನಿರ್ಧರಿಸಿದೆ. ಇಂಧನ ಸಚಿವ ಡಿ ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ನಗರಾಭಿವೃದ್ಧಿ ಸಚಿವ ಕೆ ಜೆ ಜಾರ್ಜ್, ಎಚ್ ಸಿ ಮಹದೇವಪ್ಪ, ಶಾಸಕರು ಮತ್ತು ಎಂಎಲ್ ಸಿಗಳಿಗೆ ನೋಟೀಸ್ ಜಾರಿ ಮಾಡಲು ಸಿಐಡಿ ನಿರ್ಧರಿಸಿದೆ.