ಪೊಲೀಸರ ಪ್ರಕಾರ, ಪರವಾನಗಿ ಪಡೆದ ಗನ್ ಹೊಂದಿದ್ದ ಉದ್ಯಮಿ ರವಿ ಎಂಬುವವರು ಕೆ.ಆರ್.ಪುರಂನ ದೇವಸಂದ್ರದಲ್ಲಿರುವ ತಮ್ಮ ಕಚೇರಿಯ ಬಳಿ ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಸಂಬಂಧಿಯೊಂದಿಗೆ ಜಗಳ ಮಾಡುತ್ತಿದ್ದರು. ಈ ವೇಳೆ ಜಗಳ ತಾರಕಕ್ಕೆಹೋಗಿ ಸಂಬಂಧಿಯನ್ನು ಹೆದರಿಸಲು ರವಿ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದರಿಂದ ಕೆಲ ಕಾಲ ಈ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.