ಬೆಂಗಳೂರಿನಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಉದ್ಯಮಿ, ಬಂಧನ

ಉದ್ಯಮಿಯೊಬ್ಬರು ತಮ್ಮ ಸಂಬಂಧಿಯನ್ನು ಹೆದರಿಸಲು ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರ ಅತಿಥಿಯಾಗಿರುವ ಘಟನೆ ನಗರದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಉದ್ಯಮಿಯೊಬ್ಬರು ತಮ್ಮ ಸಂಬಂಧಿಯನ್ನು ಹೆದರಿಸಲು ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರ ಅತಿಥಿಯಾಗಿರುವ ಘಟನೆ ನಗರದ ದೇವಸಂದ್ರದಲ್ಲಿ ಶನಿವಾರ ನಡೆದಿದೆ.
ಪೊಲೀಸರ ಪ್ರಕಾರ, ಪರವಾನಗಿ ಪಡೆದ ಗನ್ ಹೊಂದಿದ್ದ ಉದ್ಯಮಿ ರವಿ ಎಂಬುವವರು ಕೆ.ಆರ್.ಪುರಂನ ದೇವಸಂದ್ರದಲ್ಲಿರುವ ತಮ್ಮ ಕಚೇರಿಯ ಬಳಿ ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಸಂಬಂಧಿಯೊಂದಿಗೆ ಜಗಳ ಮಾಡುತ್ತಿದ್ದರು. ಈ ವೇಳೆ ಜಗಳ ತಾರಕಕ್ಕೆಹೋಗಿ ಸಂಬಂಧಿಯನ್ನು ಹೆದರಿಸಲು ರವಿ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದರಿಂದ ಕೆಲ ಕಾಲ ಈ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.
ಗುಂಡಿನ ಶಬ್ದದಿಂದ ಬೆಚ್ಚಿಬಿದ್ದ ಜನ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಳ್ಥಕ್ಕೆ ಆಗಮಿಸಿದ ಪೊಲೀಸರು ಉದ್ಯಮಿ ರವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com