ಬೆಂಗಳೂರು : ಸಿಐಡಿ ಡಿಐಜಿ ಸೋನಿಯಾ ನಾರಂಗ್ ವಿರುದ್ಧ ಜಾತಿ ನಿಂದನೆ ಆರೋಪ ಹೊರಿಸಿದ್ದ ಸಿಐಡಿ ಎಸ್ ಪಿ ಮಧುರಾ ವೀಣಾ ಅವರನ್ನು ಗುಪ್ತಚರ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.
ಲಂಚ ಪಡೆದ ಆರೋಪ ಹೊತ್ತು ತನಿಖೆ ಎದುರಿಸುತ್ತಿರುವ ಮಧುರವೀಣಾ ಅವರನ್ನು ರಾಜ್ಯ ಸರ್ಕಾರ ರಾಜ್ಯ ಗುಪ್ತದಳದ ಎಸ್ಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮಧುರವೀಣಾ ಅವರು ಬೆಂಗಳೂರಿನ ಹೊಟೇಲ್ ಒಂದರ ಮೇಲೆ ದಾಳಿ ನಡೆಸಿದ್ದ ವೇಳೆ ವೇಶ್ಯಾವಾಟಿಕೆ ಆರೋಪ ಹೊರಿಸಿ 2 ಲಕ್ಷ ರು. ಲಂಚ ಪಡೆದಿರುವ ಆರೋಪ ಎದುರಿಸುತ್ತಿದ್ದಾರೆ.
ಮಧುರವೀಣಾ ಅವರ ಮೇಲಿರುವ ಆರೋಪದ ಕುರಿತಾಗಿ ತನಿಖೆಗಾಗಿ ಸಿಐಡಿ ಆಂತರಿಕ ಭದ್ರತಾ ದಳದ ಐಜಿಪಿ ಮಾಲಿನಿ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ.
Advertisement