ಶ್ಯಾಂ ಭಟ್ ಆಯ್ಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ಕೆಪಿಎಸ್ ಸಿ ಮುಖ್ಯಸ್ಥ ಸ್ಥಾನಕ್ಕೆ ಶ್ಯಾಂ ಭಟ್ ಹೆಸರನ್ನು ಅಂತಿಮಗೊಳಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಮರ್ಥಿಸಿಕೊಂಡಿದ್ದಾರೆ...
ಮುಖ್ಯಮಂತ್ರಿ ಸಿದ್ದರಾಮಯ್
ಮುಖ್ಯಮಂತ್ರಿ ಸಿದ್ದರಾಮಯ್
Updated on

ಮೈಸೂರು: ಕೆಪಿಎಸ್ ಸಿ ಮುಖ್ಯಸ್ಥ ಸ್ಥಾನಕ್ಕೆ ಶ್ಯಾಂ ಭಟ್ ಹೆಸರನ್ನು ಅಂತಿಮಗೊಳಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಮರ್ಥಿಸಿಕೊಂಡಿದ್ದಾರೆ.

ಕೆಪಿಎಸ್ ಸಿ ಮುಖ್ಯಸ್ಥ ಸ್ಥಾನಕ್ಕೆ ಶ್ಯಾಂ ಭಟ್ ಹೆಸರನ್ನು ಅಂತಿಮಗೊಳಿಸಿರುವುದಕ್ಕೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ನಾಯಕ ಜಗದೀಶ್ ಮಾಡುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾದದ್ದು. ಶ್ಯಾಂ ಭಟ್ ನೇಮಕಾತಿ ಕುರಿತು ರಾಜ್ಯಪಾಲರು ಸ್ಪಷ್ಟನೆ ಕೇಳಿಲ್ಲ ಎಂದು ಹೇಳಿದ್ದಾರೆ.

ಸರ್ಕಾರದ ಹೆಸನ್ನು ಹಾಳುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಕೆಪಿಎಸ್ ಸಿ ಮುಖ್ಯಸ್ಥ ಸ್ಥಾನಕ್ಕೆ ಸರ್ಕಾರ ಸೂಕ್ತ ಹೆಸರನ್ನು ಸೂಚಿಸಿದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯಸಭಾ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಬೇಕಿದ್ದು, ಹೆಸರು ಅಂತಿಮ ಜವಾಬ್ದಾರಿಯನ್ನು ಹೈ ಕಮಾಂಡ್ ನೋಡಿಕೊಳ್ಳಲಿದೆ. ಹೈ ಕಮಾಂಡ್ ಜೊತೆಗಿನ ಮಾತುಕತೆ ವೇಳೆ ಸಂಪುಟ ಪುನಾರಚನೆ ಕುರಿತಂತೆಯೂ ಮಾತುಕತೆ ನಡೆಸಲಾಗುತ್ತದೆ. ಇನ್ನು ರಾಜ್ಯ ಬರ ಪರಸ್ಥಿತಿ ಕುರಿತಂತೆ ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಲು ಕಾಲಾವಕಾಶ ಬೇಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com