ವಿಜಯಪುರ: ಈಜಲು ಹೋದ ಮೂವರು ಬಾಲಕರು ನೀರುಪಾಲು

ಈಜಲು ಹೋದ ಮೂವರು ಬಾಲಕರು ನೀರು ಪಾಲಾದ ಘಟನೆ ಶನಿವಾರ ವಿಜಯಪುರ ತಾಲೂಕಿನ ಆಲಮೇಲದಲ್ಲಿ ನಡೆದಿದೆ.
ಆಲಮೇಲ ಕೆರೆ
ಆಲಮೇಲ ಕೆರೆ
ವಿಜಯಪುರ: ಈಜಲು ಹೋದ ಮೂವರು ಬಾಲಕರು ನೀರು ಪಾಲಾದ ಘಟನೆ ಶನಿವಾರ ವಿಜಯಪುರ ತಾಲೂಕಿನ ಆಲಮೇಲದಲ್ಲಿ ನಡೆದಿದೆ.
ಆಲಮೇಲ ಪಟ್ಟಣಕ್ಕೆ ಸಮೀಪದಲ್ಲಿರುವ ಕೆರೆಯಲ್ಲಿ ಈಜಲು ಹೋಗಿದ್ದ ಸೈಫನ್ ಮೇಲಿನಮನಿ(10), ಗಾಲೀಬ್ ಲಾಲ್​ಸಾಬ್ ಮೇಲಿನಮನಿ(12) ಮತ್ತು ಅಕ್ಬರ್ ಬಷೀರ್ ಮುಲ್ಲಾ (7) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಬಾಲಕರು ನೀರಿನಲ್ಲಿ ಮುಳುಗಿರುವ ಮಾಹಿತಿ ಪಡೆದು ಆಲಮೇಲ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಶವಗಳನ್ನು ಹೊರ ತೆಗೆದಿದ್ದಾರೆ.
ಈ ಸಂಬಂಧ ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com