ಬೆಂಗಳೂರು: ಸಾಮೂಹಿಕ ರಜೆ ಪಡೆದು ಪ್ರತಿಭಟನೆ ನಡೆಸಲು ತೀರ್ಮಾನಿಸಿರುವ ಪೊಲೀಸರು ಪ್ರತಿಭಟನೆ ನಡೆಸಿದರೆ ವಜಾ ಆದೇಶ ಪಡೆಸಲು ಸಿದ್ಧರಾಗುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಸಮಾಜಘಾತುಕ ಶಕ್ತಿಗಳು ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ತಪ್ಪು ಮಾರ್ಗದರ್ಶನ ನೀಡಿ ಜೂ.4 ರಂದು ರಜೆ ಮೇಲೆ ತೆರಳುವಂತೆ ಪ್ರಚೋದನೆ ನೀಡುತ್ತಿರುವುದಾಗಿ ತಿಳಿದುಬಂದಿದೆ.
ಪೊಲೀಸ್ ಇಲಾಖೆಯಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ. ಒಂದು ವೇಳೆ ಪ್ರತಿಭಟನೆ ನಡೆಸಿದರೆ ಈ ನಡೆಯು ಇಲಾಖೆಯ ಅಶಿಸ್ತು ಆಗಿರುತ್ತದೆ. ಪ್ರತಿಭಟನೆ ನಡೆಸಿದ್ದೇ ಆದರೆ, ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಹೀಗಾಗಿ ಹೊರಗಿನ ಶಕ್ತಿಗಳ ಪ್ರಚೋದನೆಗಳಿಗೊಳಗಾಗದೆ ಜಾಗೃತರಾಗಿರುವಂತೆ ಪೊಲೀಸ್ ಸಿಬ್ಬಂದಿಗಳಿಗೆ ಸುತ್ತೋಲೆಯನ್ನು ಹೊರಡಿಸಿದ್ದಾರೆ.
Advertisement