ಬೆಂಗಳೂರು: ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಪಟಾಕಿ ವಿರೋಧಿ ಶಿಬಿರಗಳ ಮೂಲಕ ಜನರಿಗೆ ಈ ವರ್ಷ ಜಾಗೃತಿ ಮೂಡಿಸಿದ ಹಿನ್ನೆಲೆಯಲ್ಲಿ ಈ ಬಾರಿ ಮಾಲಿನ್ಯ ಕಡಿಮೆಯಾಗಬಹುದೆಂಬ ಲೆಕ್ಕಾಚಾರ ಉಲ್ಟಾ ಹೊಡೆದಿದೆ. ಪ್ರತಿ ವರ್ಷಕ್ಕಿಂತ ಈ ವರ್ಷ ಮಾಲಿನ್ಯದ ಪ್ರಮಾಣ ಹೆಚ್ಚಿದೆ.ಆದರೆ ಟ್ರಾಫಿಕ್ ಪ್ರಮಾಣ ಕಡಿಮೆಯಾಗಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಎರಡು ದಿನಗಳ ಕಾಲ ನಿರಂತರ ವಾಯು ಗುಣಮಟ್ಟದ ಪರಿಸ್ಥಿತಿ ಅವಲೋಕನದಿಂದ ಈ ಮಾಹಿತಿ ತಿಳಿದು ಬಂದಿದೆ.
ಈ ವರ್ಷದ ದೀಪಾವಳಿಯಲ್ಲಿ ಹೆಚ್ಚಿರುವ ಮಾಲಿನ್ಯದಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅಲರ್ಜಿ ಮತ್ತು ಉಸಿರಾಟದ ಸಮಸ್ಯೆಗಳು ಹೆಚ್ಚಾಗಿವೆ. ರಾಜ್ಯ ವಾಯಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರಿನ 13 ಕೇಂದ್ರಗಳ ಮಾಲಿನ್ಯ ಮಟ್ಟವನ್ನು ಪರಿಶೀಲಿಸಿದಾಗ ಮಾಲಿನ್ಯ ಪ್ರಮಾದ ಹೆಚ್ಚಿರುವುದು ಕಂಡು ಬಂದಿದೆ. ಕಳೆದ ಬಾರಿಗೆ ಹೋಲಿಸಿದರೇ ಈ ವರ್ಷದ ದೀಪಾವಳಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚಿರುವುದು ಕಂಡು ಬಂದಿದೆ.
ಸಹಜ ದಿನಗಳಲ್ಲಿ ರಜಾದಿನಗಳಲ್ಲಿ ವಾಹನಗಳ ಓಡಾಟ ಕಡಿಮೆ ಇರುತ್ತಿದ್ದ ಕಾರಣ ಮಾಲಿನ್ಯದ ಪ್ರಮಾಣ ತಗ್ಗುತ್ತಿತ್ತು. ಆದರೆ ದೀಪಾವಳಿ ಕಾರಣವಾಹನಗಳ ಓಡಾಟ ಕಡಿಮೆಯಾಗಿದ್ದರೂ ಮಾಲಿನ್ಯದ ಪ್ರಮಾಣದಲ್ಲಿ ಇಳಿಕೆಯಾಗಿಲ್ಲ. ಜೊತೆಗೆ ವಾಯು ಮಾಲಿನ್ಯದ ಜೊತೆಗೆ ಶಬ್ದ ಮಾಲಿನ್ಯದಲ್ಲೂ ಹೆಚ್ಚಳವಾಗಿದೆ ಎಂದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.
Advertisement