ಬೆಳಗಾವಿ ಮೇಯರ್, ಉಪ ಮೇಯರ್ ನಾಪತ್ತೆ

ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವದ ದಿನ ಕಪ್ಪು ಪಟ್ಟಿ ಧರಿಸಿ ಕರಾಳ ದಿನ ಆಚರಿಸಿದ್ದ ಬೆಳಗಾವಿ ಪಾಲಿಕೆ ಮೇಯರ್ ಸರಿತಾ ಪಾಟೀಲ್ ಹಾಗೂ ಉಪಮೇಯರ್ ...
ಸರಿತಾ ಪಾಟೀಲ್ ಹಾಗೂ  ಸಂಜಯ್ ಶಿಂಧೆ
ಸರಿತಾ ಪಾಟೀಲ್ ಹಾಗೂ ಸಂಜಯ್ ಶಿಂಧೆ
Updated on

ಬೆಳಗಾವಿ: ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವದ ದಿನ ಕಪ್ಪು ಪಟ್ಟಿ ಧರಿಸಿ ಕರಾಳ ದಿನ ಆಚರಿಸಿದ್ದ ಬೆಳಗಾವಿ ಪಾಲಿಕೆ ಮೇಯರ್ ಸರಿತಾ ಪಾಟೀಲ್ ಹಾಗೂ ಉಪಮೇಯರ್ ಸಂಜಯ್ ಶಿಂಧೆ ನಾಪತ್ತೆಯಾಗಿದ್ದಾರೆ.

ಕರ್ನಾಟಕ ಮಹಾರಾಷ್ಟ್ರ ಗಡಿಭಾಗದಲ್ಲಿರುವ ಬೆಳಗಾವಿ ಜಿಲ್ಲೆಯಿಂದ ನಗರ ಮೊದಲ ಹಾಗೂ ಎರಡನೇ ಪ್ರಜೆಗಳಾದ ಈ ಇಬ್ಬರೂ ಪಾಲಿಕೆ ಆವರಣದಿಂದ ಸರ್ಕಾರಿ ವಾಹನದ ಜೊತೆ ನಾಪತ್ತೆಯಾಗಿದ್ದಾರೆ ಎಂದು ಆಯುಕ್ತರ ತಿಳಿಸಿದ್ದಾರೆ.

ಮೇಯರ್ ಹಾಗೂ ಉಪಮೇಯರ್ ಮತ್ತು ಅವರ ಚಾಲಕರುಗಳ ಮೊಬೈಲ್ ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಲಾಗಿದೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಜೊತೆ ಸಂಪರ್ಕ ಹೊಂದಿರುವ ಮೇಯರ್ ಹಾಗೂ ಉಪ ಮೇಯರ್ ಮಹಾರಾಷ್ಟ್ರಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವೆಂಬರ್ 1 ರಂದು ಕರ್ನಾಟರ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ ಮೇಯರ್ ಹಾಗೂ ಉಪ ಮೇಯರ್, ಕನ್ನಡ ಪರ ಸಂಘಟನೆಗಳು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತವೆ. ಜೊತೆಗೆ ತಮ್ಮ ಮುಖಕ್ಕೆ ಮಸಿ ಬಳಿಯುತ್ತಾರೆ ಎಂಬ ಭಯದಿಂದ ಬೆಳಗಾವಿಯಿಂದ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ.

ಕರ್ನಾಟಕ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ್ದಾರೆ. ರಾಜ್ಯದ ವಿರುದ್ಧ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಈ ಇಬ್ಬರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com