ಇದರ ವಿರುದ್ಧ ಹೈಕೋರ್ಟ್ ನಲ್ಲಿ ವಕೀಲರಾಗಿರುವ ವಿದ್ಯಾ ಪ್ರಸಾದ್ ಪತಿ ಹೆಚ್.ಎನ್.ಎಮ್ ಪ್ರಸಾದ್ ಮತ್ತು ಅವರ ಮಕ್ಕಳು ದೂರು ನೀಡಿದ್ದರು. ಅವರು ತಮ್ಮ ದೂರಿನಲ್ಲಿ, ತಮ್ಮ ಪತ್ನಿ ವಿದ್ಯಾರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಆರೋಗ್ಯವಾಗಿದ್ದರು. ಆದರೆ ವೈದ್ಯರ ನಿರ್ಲಕ್ಷತನದಿಂದಾಗಿ ಮೃತಪಟ್ಟಿದ್ದಾರೆ. ಪ್ರಾಥಮಿಕ ವರದಿಯಲ್ಲಿ ವಿದ್ಯಾರಿಗೆ ಹೃದಯದ ಸಮಸ್ಯೆ ಇದೆ ಎಂದು ಹೇಳಿದರೂ ಕೂಡ ಅವರನ್ನು ಯಾವುದೇ ಹೃದ್ರೋಗ ತಜ್ಞರು ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲಿಲ್ಲ ಎಂದು ಆರೋಪಿಸಿದ್ದಾರೆ.