ಮೈಸೂರಿನಲ್ಲಿ ಬಿಜೆಪಿ ಮುಖಂಡನ ಅನುಮಾನಾಸ್ಪದ ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಜೆಪಿ ಮುಖಂಡರ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಮೈಸೂರಿನಲ್ಲಿ ಸ್ಥಳೀಯ ಬಿಜೆಪಿ ಮುಖಂಡ ರವಿ ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವುದು ವರದಿಯಾಗಿದೆ.
ಮೈಸೂರಿನಲ್ಲಿ ಬಿಜೆಪಿ ಮುಖಂಡನ ಅನುಮಾನಾಸ್ಪದ ಸಾವು
ಮೈಸೂರಿನಲ್ಲಿ ಬಿಜೆಪಿ ಮುಖಂಡನ ಅನುಮಾನಾಸ್ಪದ ಸಾವು
Updated on
ಮೈಸೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಜೆಪಿ ಮುಖಂಡರ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಮೈಸೂರಿನಲ್ಲಿ ಸ್ಥಳೀಯ ಬಿಜೆಪಿ ಮುಖಂಡ ರವಿ ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವುದು ವರದಿಯಾಗಿದೆ. 
ತಾಲೂಕು ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಮಾಗಳಿಯ ರವಿ, ಪಕ್ಷ ಸಂಘಟನೆ, ಸ್ಥಳೀಯ ರಾಜಕಾರಣದಲ್ಲಿ ಸಕ್ರಿಯವಾಗಿದ್ದರು, ನ.4 ರಂದು ರಾತ್ರಿ ಸಭೆ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ರವಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದ್ದು, ಮಾಗಳಿ ಹೊರವಲಯದಲ್ಲಿ ಅವರ ಶವ ಪತ್ತೆಯಾಗಿದೆ. 
ರವಿ ಅವರ ತಲೆಗೆ ಗಂಭೀರ ಗಾಯಗಳಾಗಿದೆ. ಬಿಜೆಪಿ ಮುಖಂಡನ ಅನುಮಾನಾಸ್ಪದ ಸಾವಿನ ಬಗ್ಗೆ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com