ಬೆಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಮೇಲೆ ಗುಂಡಿನ ದಾಳಿ

ಪೊಲೀಸರ ಮೇಲೆ ಹಲ್ಲೆಗೆ ಯತ್ಮಿಸಿದ ರೌಡಿ ಶೀಟರ್ ಒಬ್ಬರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಸೋಮವಾರ ಅನ್ನಪೂರ್ಣೇಶ್ವರಿ..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಯತ್ಮಿಸಿದ ರೌಡಿ ಶೀಟರ್ ಒಬ್ಬರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಸೋಮವಾರ ಅನ್ನಪೂರ್ಣೇಶ್ವರಿನಗರದಲ್ಲಿ ನಡೆದಿದೆ.
ಇಂದು ಸಂಜೆ ಗಸ್ತು ತಿರುಗುತ್ತಿದ್ದ ಹೋಯ್ಸಳ ವಾಹನದ ಮೇಲೆ ರೌಡಿ ಶೀಟರ್ ಆತಿಕ್ ದಾಳಿ ಮಾಡಿದ್ದು, ದಾಳಿಯಲ್ಲಿ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಲ್ಲೂರ್ ಹಾಗೂ ಪೊಲೀಸ್ ಪೇದೆಯೊಬ್ಬರು ಗಾಯಗೊಂಡಿದ್ದಾರೆ. 
ಇನ್ನು ಆತ್ಮರಕ್ಷಣೆಗಾಗಿ ಪೊಲೀಸರು ಸಹ ಆತಿಕ್ ಮೇಲೆ ಗುಂಡು ಹಾರಿಸಿದ್ದು, ರೌಡಿ ಶೀಟರ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com