ಆಗಸ್ಟ್ 30ರಂದು ಆಹಾರ ಹರಸಿ ಸಾವನದುರ್ಗ ಕಾಡಿನಿಂದ ಬನ್ನೇರುಘಟ್ಟ ಅರಣ್ಯಕ್ಕೆ ತೆರಳುವ ವೇಳೆ ನಾಡಿಗೆ ಬಂದ ಆನೆ ಸಿದ್ದ ಬೆಂಗಳೂರು ದಕ್ಷಿಣ ತಾಲೂಕು ಗೋಪಾಲಪುರದ ಬಳಿಯ ಕಾಲುವೆಯಲ್ಲಿ ಇಳಿದು ಮುಂಭಾಗದ ಬಲಗಾಲಿಗೆ ಪೆಟ್ಟು ಮಾಡಿಕೊಂಡಿತ್ತು.ನಂತರ ಸೆಪ್ಟೆಂಬರ್ 3ರಿಂದ ಮಾಗಡಿಯ ಮಂಚನಬೆಲೆ ಜಲಾಶಯದ ಹಿನ್ನೀರಿನಲ್ಲೇ ಆನೆ ವಾಸ್ತವ್ಯವಿತ್ತು. ಆನೆಗೆ ಸ್ಥಳೀಯ ಅರಣ್ಯ ಇಲಾಖೆ ಚಿಕಿತ್ಸೆ ನೀಡಿತ್ತಾದರೂ ಅದು ಉಪಯೋಗವಾಗಿಲ್ಲ. ಕಳೆದ ಕೆಲ ದಿನಗಳಿಂದ ಹಿನ್ನೀರನಲ್ಲೇ ಕಾಲ ಕಳೆಯುತ್ತಿರುವ ಆನೆಯ ಆರೋಗ್ಯ ದಿನೇ, ದಿನೇ ಕುಸಿಯುತ್ತಿದೆ.