ಅರಕಲಗೂಡು: ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮುತ್ತಿಗೆ ಗ್ರಾಮದ ಬಳಿ ಬೋರ್ವೆಲ್ ಲಾರಿಯೊಂದು ಪಲ್ಟಿ ಹೊಡೆದ ಐವರು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಳಗಿನ ಜಾವ 4.30ರ ಸುಮಾರಿನಲ್ಲಿ ಬೋರ್ ವೆಲ್ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ. ಮೃತರು ಜಾರ್ಖಂಡ್ ಮೂಲದ ಅನುತ್, ಮುಚಿರಾಮ್, ಭೀಮ್ ಸಿಂಗ್, ಪುದುರಾಮ್ ಹಾಗೂ ಅನಿಲ್ ಮಾತು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement