ಹಾಸನದಲ್ಲಿ ಬೋರ್‌ವೆಲ್‌ ಲಾರಿ ಪಲ್ಟಿ: ಐವರ ದುರ್ಮರಣ

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮುತ್ತಿಗೆ ಗ್ರಾಮದ ಬಳಿ ಬೋರ್‌ವೆಲ್‌ ಲಾರಿಯೊಂದು ಪಲ್ಟಿ ಹೊಡೆದ ಐವರು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ...
ಬೋರ್‌ವೆಲ್‌ ಲಾರಿ
ಬೋರ್‌ವೆಲ್‌ ಲಾರಿ

ಅರಕಲಗೂಡು: ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮುತ್ತಿಗೆ ಗ್ರಾಮದ ಬಳಿ ಬೋರ್‌ವೆಲ್‌ ಲಾರಿಯೊಂದು ಪಲ್ಟಿ ಹೊಡೆದ ಐವರು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಳಗಿನ ಜಾವ 4.30ರ ಸುಮಾರಿನಲ್ಲಿ ಬೋರ್ ವೆಲ್ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ. ಮೃತರು ಜಾರ್ಖಂಡ್ ಮೂಲದ ಅನುತ್, ಮುಚಿರಾಮ್, ಭೀಮ್ ಸಿಂಗ್, ಪುದುರಾಮ್ ಹಾಗೂ ಅನಿಲ್ ಮಾತು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com