ತುಮಕೂರು ತಾಲ್ಲೂಕು ಚೇಳೂರಿನ ಎಸ್ ಬಿಎಂ ಬ್ಯಾಂಕಿನ ಮುಂದೆ ಇಂದು ಮಧ್ಯಾಹ್ನ 12.30 ಕ್ಕೆ ಸಿದ್ದಪ್ಪ(70) ಎಂಬುವವರು ನೋಟನ್ನು ಬದಲಾಸಿಕೊಳ್ಳಲು ಸರತಿ ಸಾಲಿನಲ್ಲಿ ನಿಂತಿದ್ದರು. ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದಿದ್ದಾರೆ. ಸರತಿ ಸಾಲಿನಲ್ಲಿ ನಿಂತಿದ್ದ ಜನರು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯದರು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.