ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುವಾಸ ಅನುಭವಿಸಿದ್ದು, ಅವರ ಎಲ್ಲಾ ಆಸ್ತಿ, ಬ್ಯಾಂಕ್ ಖಾತೆಯನ್ನು ಸಿಬಿಐ ಮುಟ್ಟುಗೋಲು ಹಾಕಿಕೊಂಡಿತ್ತು. ಹಾಗಿದ್ದ ಮೇಲೆ ಅದ್ದೂರಿ ಮದುವೆ ಮಾಡಲು ಹಣ ಎಲ್ಲಿಂದ ಬಂತು, ಹಣದ ಮೂಲದ ಬಗ್ಗೆ ತನಿಖೆಯಾಗಬೇಕೆಂದು ನರಸಿಂಹಮೂರ್ತಿ ಅವರು ದೂರಿನಲ್ಲಿ ಮನವಿ ಮಾಡಿದ್ದರು.