ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲ ಅಧಿವೇಶನದಲ್ಲಿ, ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಪತ್ರದಲ್ಲಿರುವುದನ್ನು ಓದಿಹೇಳಿದರು. ಜಯದೇವ ಹೃದ್ರೋಗ ಸಂಸ್ಥೆಯ ಅಧ್ಯಕ್ಷ ಡಾ.ಸಿ.ಎನ್.ಮಂಜುನಾಥ್ ಅವರು ಅಂದಾಜು ಲೆಕ್ಕ ಹಾಕಿ ಪ್ರತಿ ಐಸಿಯು ಘಟಕಕ್ಕೆ ಸುಮಾರು 27 ಲಕ್ಷ ವೆಚ್ಚವಾಗಲಿದೆ. ಸ್ಥಳೀಯ ಶಾಸಕರು ಮತ್ತು ಸಂಸದರಿಂದ ತಲಾ ಸುಮಾರು 20 ಲಕ್ಷ ರೂಪಾಯಿ ಸಂಗ್ರಹಿಸಲಾಗುವುದು. ಜಿಲ್ಲಾಧಿಕಾರಿ ಈ ಸಂಬಂಧ ಸ್ಥಳೀಯ ಜನಪ್ರತಿನಿಧಿಗಳಿಗೆ ಪತ್ರ ಬರೆಯಲಿದ್ದಾರೆ. ಕೇಂದ್ರ ಸರ್ಕಾರದ ಆರೋಗ್ಯ ಅಭಿಯಾನದಡಿ ಉಳಿದ ಹಣವನ್ನು ಕೇಳಲಾಗುವುದು. ಕೇಂದ್ರ ಸರ್ಕಾರ ಈಗಾಗಲೇ ಯೋಜನೆಗೆ ಅಸ್ತು ನೀಡಿದೆ ಎಂದು ಹೇಳಿದರು.