ಮಠಗಳ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ: ಸ್ವರೂಪಾನಂದ ಸರಸ್ವತಿ ಸ್ವಾಮಿ ಅಸಮಾಧಾನ

ಮಠದ ವಿಚಾರಗಳಲ್ಲಿ ಸರ್ಕಾರ ಮಧ್ಯಸ್ಥಿಕೆವಹಿಸುತ್ತಿರುವುದಕ್ಕೆ ದ್ವಾರಕಾಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಶುಕ್ರವಾರ ಅಸಮಾಧಾನ...
ಸ್ವಾಮಿ ಸ್ವರೂಪಾನಂದ ಸರಸ್ವತಿ
ಸ್ವಾಮಿ ಸ್ವರೂಪಾನಂದ ಸರಸ್ವತಿ
Updated on

ಬೆಂಗಳೂರು: ಮಠದ ವಿಚಾರಗಳಲ್ಲಿ ಸರ್ಕಾರ ಮಧ್ಯಸ್ಥಿಕೆವಹಿಸುತ್ತಿರುವುದಕ್ಕೆ ದ್ವಾರಕಾಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಧಾರ್ಮಿಕ ಸಂಸ್ಥೆಗಳ ಮೇಲೆ ನಿರ್ಬಂಧಗಳನ್ನು ಹೇರಿವುದು ತಪ್ಪು. ಧರ್ಮ ವಿರೋಧಿ ನೀತಿಗಳನ್ನು ನಾವು ಎಂದಿಗೂ ಒಪ್ಪಿಕೊಳ್ಳುವುದಿಲ್ಲ. ಮಠಗಳು ಹಾಗೂ ಧಾರ್ಮಿಕ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸುವುದು ಹಾಗೂ ಮಠಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದರಿಂದ ಸರ್ಕಾರ ದೂರವಿರಬೇಕೆಂದು ಹೇಳಿದ್ದಾರೆ.

ಸಮಾವೇಶ ಕಾರ್ಯಕ್ರಮವೊಂದರಲ್ಲಿ ಕೆಲವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಮುತ್ತಿಗೆ ಹಾಕುವುದಾಗಿ ಈ ಹಿಂದೆ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳು, ಮಠಕ್ಕೆ ಮುತ್ತಿಗೆ ಹಾಕಿದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತೇನೆಂದು ಹೇಳಿದ್ದರು.

ಅಲ್ಲದೆ, ಮಠಕ್ಕೆ ರಕ್ಷಣೆ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಗೋರಕ್ಷಕರಿಂದ ಆಗುತ್ತಿರುವ ಹಿಂಸಾಚಾರವನ್ನು ವಿರೋಧಿಸಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ಆ ಸಮಾವೇಶದಲ್ಲಿ ಅನಾವಶ್ಯಕವಾಗಿ ಮಠದ ವಿಚಾರವನ್ನು ಎಳೆಯಲಾಗಿದೆ. ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ನಡೆಸುತ್ತಿರುವುದಕ್ಕೆ ಈಗಾಗಲೇ ನಮ್ಮ ವಿರೋಧವಿದೆ ಎಂದಿದ್ದರು.

ಮಠಗಳಿಗೆ ಮುತ್ತಿಗೆ ಹಾಕುವ ಬೆದರಿಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಧರ್ಮಾಧಿಕಾರಿಗಳು ಇದಕ್ಕೆ ವಿರೋಧಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com