ತೆರೆ ಮೇಲೆ ಬಂದ 'ವಿಷ್ಣು' ನೋಡಿ ಅಭಿಮಾನಿಗೆ ಹೃದಯಾಘಾತ: ಸಾವು

ಸಾಹಸ ಸಿಂಹ ದಿವಂಗತ ಡಾ.ವಿಷ್ಣುವರ್ಧನ್ ಅವರ ಮರು ಸೃಷ್ಟಿಯಿರುವ 'ನಾಗರಹಾವು' ಚಿತ್ರ ಪ್ರದರ್ಶನದ ವೇಳೆ ತೆರೆ ಮೇಲೆ ವಿಷ್ಣುವರ್ಧನ್ ಅವರನ್ನು ನೋಡಿದ ಅಭಿಮಾನಿಯೊಬ್ಬರಿಗೆ ಹೃದಯಾಘಾತವಾಗಿ...
ನಾಗರಹಾವು ಕನ್ನಡ ಚಿತ್ರ
ನಾಗರಹಾವು ಕನ್ನಡ ಚಿತ್ರ
Updated on

ಬೆಂಗಳೂರು: ಸಾಹಸ ಸಿಂಹ ದಿವಂಗತ ಡಾ.ವಿಷ್ಣುವರ್ಧನ್ ಅವರ ಮರು ಸೃಷ್ಟಿಯಿರುವ 'ನಾಗರಹಾವು' ಚಿತ್ರ ಪ್ರದರ್ಶನದ ವೇಳೆ ತೆರೆ ಮೇಲೆ ವಿಷ್ಣುವರ್ಧನ್ ಅವರನ್ನು ನೋಡಿದ ಅಭಿಮಾನಿಯೊಬ್ಬರಿಗೆ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

ಸುಬ್ರಮಣಿ ಅಲಿಯಾಸ್ ರಾಜು (31) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಜಯನಗರ ನಿವಾಸಿಯಾಗಿರುವ ಸುಬ್ರಮಣಿಯವರು, ನಿನ್ನೆಯಷ್ಟೇ ಬಿಡುಗಡೆಗೊಂಡ ನಾಗರಹಾವು ಚಿತ್ರವನ್ನು ಮಾರ್ನಿಂಗ್ ಶೋನಲ್ಲಿ ನೋಡಿದ್ದಾರೆ. ವಿಷ್ಣು ಅವರನ್ನು ನೋಡಬೇಕೆಂಬ ಆಸೆಗೆ ಮತ್ತೆ ಚಿತ್ರ ನೋಡಲು ಮಧ್ಯಾಹ್ನ ಸ್ವಾಗತ್ ಗರುಡಾ ಮಾಲ್ ಗೆ ಹೋಗಿದ್ದಾರೆ.

ನಾಗರಹಾವು ಸಿನಿಮಾದ ಕ್ಲೈಮ್ಯಾಕ್ಸ್ ದೃಶ್ಯದಲ್ಲಿ ವಿಷ್ಣುವರ್ಧನ್ ಅವರನ್ನು ಗ್ರಾಫಿಕ್ ಬಳಸಿ ನಾಗರಹಾವು ರೂಪದಲ್ಲಿ ತೆರೆ ಮೇಲೆ ತರಲಾಗಿದೆ. ಚಿತ್ರದ ಕಡೆಯ 10 ನಿಮಿಷದಲ್ಲಿ ಈ ಗ್ರಾಫಿಕ್ ದೃಶ್ಯಾವಳಿಗಳು ಮೂಡುತ್ತದೆ. ಈ ಸಂದರ್ಭದಲ್ಲಿ ವಿಷ್ಣುವರ್ಧನ್ ಅವರು ತೆರೆಯ ಮೇಲೆ ಬರುತ್ತಾರೆ.

ವಿಷ್ಣುವರ್ಧನ್ ಅವರನ್ನು ತೆರೆಮೇಲೆ ಕಾಣುತ್ತಿದ್ದಂತೆ ಸುಬ್ರಮಣಿಯವರು ಭಾವೋದ್ವೇಗಕ್ಕೆ ಒಳಗಾಗಿದ್ದಾರೆ, ಈ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡು, ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಸುಬ್ರಮಣಿಯವರನ್ನು ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com