ಪಾರ್ಕಿಂಗ್ ವಿಚಾರಕ್ಕೆ ಜಗಳ: ಹೊಟೇಲ್ ಮ್ಯಾನೇಜರ್ ಮೇಲೆ ಆಟೋ ಚಾಲಕರಿಂದ ಹಲ್ಲೆ

: ಬೈಕ್ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ನಾಲ್ಕು ಆಟೋ ಡ್ರೈವರ್ ಗಳು ಹೊಟೇಲ್ ನ ಮ್ಯಾನೇಜರ್ ಮೇಲೆ ಹಲ್ಲೆ ಮಾಡಿರುವ ಘಟನೆ ಯಲಹಂಕ ನ್ಯೂ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೈಕ್ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ನಾಲ್ಕು ಆಟೋ ಡ್ರೈವರ್ ಗಳು ಹೊಟೇಲ್ ನ ಮ್ಯಾನೇಜರ್ ಮೇಲೆ ಹಲ್ಲೆ ಮಾಡಿರುವ ಘಟನೆ ಯಲಹಂಕ ನ್ಯೂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಂದನಾ ರೆಸ್ಟೋರೆಂಟ್ ಮ್ಯಾನೇಜರ್ ವಿ. ಪುರಂದರ್ ನಾಯ್ಡು ಎಂಬುವರು ತಾವು ಕೆಲಸ ಮಾಡುವ ರೆಸ್ಟೋರೆಂಟ್ ಮುಂದೆ ರಾತ್ರಿ 8 ಗಂಟೆ ಸುಮಾರಿಗೆ ಬೈಕ್ ಪಾರ್ಕಿಂಗ್ ಮಾಡಿದ್ದಾರೆ. ಇದಾದ ನಂತರ ರೆಸ್ಟೋರೆಂಟ್ ಗೆ ಬಂದ ನಾಲ್ವರು ಆಟೋ ಚಾಲಕರು ನಾಯ್ಡು ಅವರನ್ನು ನಿಂದಿಸಿದ್ದಾರೆ. ಬೈಕ್ ಅಲ್ಲಿ ನಿಲ್ಲಿಸಿರುವುದರಿಂದ ನಮ್ಮ ವ್ಯಾಪಾರಕ್ಕೆ ತೊಂದರೆಯಾಗುತ್ತದೆ ಎಂದು ಬೈಯ್ದಿದ್ದಾರೆ.

ಈ ವೇಳೆ ನಾಯ್ಡು ತಮ್ಮ ರೆಸ್ಟೊರೆಂಟ್ ಸಿಬ್ಬಂದಿಯನ್ನು ಅಲ್ಲಿಗೆ ಕರೆದಿದ್ದಾರೆ. ಇದರಿಂದ ಕೋಪಗೊಂಡ ಆಟೋ ಚಾಲಕರು ತಮ್ಮ ಬಳಿಯಿದ್ದ ಮಾರಕಾಸ್ತ್ರಗಳಿಂದ ನನ್ನ ಮೇಲೆ ಹಲ್ಲೆ ನಡೆಸಿದರು ಎಂದು ಪುರಂದರ್ ನಾಯ್ದು ದೂರು ದಾಖಲಿಸಿದ್ದಾರೆ.

ಈ ಎಲ್ಲಾ ಘಟನೆಗಳು ಸಿಸಿಟಿವಿಯಲ್ಲಿ ದಾಖಲಾಗಿವೆ. ನಾಯ್ಡು ಅವರು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com