ಪಾರ್ಕಿಂಗ್ ವಿಚಾರಕ್ಕೆ ಜಗಳ: ಹೊಟೇಲ್ ಮ್ಯಾನೇಜರ್ ಮೇಲೆ ಆಟೋ ಚಾಲಕರಿಂದ ಹಲ್ಲೆ

: ಬೈಕ್ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ನಾಲ್ಕು ಆಟೋ ಡ್ರೈವರ್ ಗಳು ಹೊಟೇಲ್ ನ ಮ್ಯಾನೇಜರ್ ಮೇಲೆ ಹಲ್ಲೆ ಮಾಡಿರುವ ಘಟನೆ ಯಲಹಂಕ ನ್ಯೂ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೈಕ್ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ನಾಲ್ಕು ಆಟೋ ಡ್ರೈವರ್ ಗಳು ಹೊಟೇಲ್ ನ ಮ್ಯಾನೇಜರ್ ಮೇಲೆ ಹಲ್ಲೆ ಮಾಡಿರುವ ಘಟನೆ ಯಲಹಂಕ ನ್ಯೂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಂದನಾ ರೆಸ್ಟೋರೆಂಟ್ ಮ್ಯಾನೇಜರ್ ವಿ. ಪುರಂದರ್ ನಾಯ್ಡು ಎಂಬುವರು ತಾವು ಕೆಲಸ ಮಾಡುವ ರೆಸ್ಟೋರೆಂಟ್ ಮುಂದೆ ರಾತ್ರಿ 8 ಗಂಟೆ ಸುಮಾರಿಗೆ ಬೈಕ್ ಪಾರ್ಕಿಂಗ್ ಮಾಡಿದ್ದಾರೆ. ಇದಾದ ನಂತರ ರೆಸ್ಟೋರೆಂಟ್ ಗೆ ಬಂದ ನಾಲ್ವರು ಆಟೋ ಚಾಲಕರು ನಾಯ್ಡು ಅವರನ್ನು ನಿಂದಿಸಿದ್ದಾರೆ. ಬೈಕ್ ಅಲ್ಲಿ ನಿಲ್ಲಿಸಿರುವುದರಿಂದ ನಮ್ಮ ವ್ಯಾಪಾರಕ್ಕೆ ತೊಂದರೆಯಾಗುತ್ತದೆ ಎಂದು ಬೈಯ್ದಿದ್ದಾರೆ.

ಈ ವೇಳೆ ನಾಯ್ಡು ತಮ್ಮ ರೆಸ್ಟೊರೆಂಟ್ ಸಿಬ್ಬಂದಿಯನ್ನು ಅಲ್ಲಿಗೆ ಕರೆದಿದ್ದಾರೆ. ಇದರಿಂದ ಕೋಪಗೊಂಡ ಆಟೋ ಚಾಲಕರು ತಮ್ಮ ಬಳಿಯಿದ್ದ ಮಾರಕಾಸ್ತ್ರಗಳಿಂದ ನನ್ನ ಮೇಲೆ ಹಲ್ಲೆ ನಡೆಸಿದರು ಎಂದು ಪುರಂದರ್ ನಾಯ್ದು ದೂರು ದಾಖಲಿಸಿದ್ದಾರೆ.

ಈ ಎಲ್ಲಾ ಘಟನೆಗಳು ಸಿಸಿಟಿವಿಯಲ್ಲಿ ದಾಖಲಾಗಿವೆ. ನಾಯ್ಡು ಅವರು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com