ಹಾರ್ನ್ ರಹಿತ ವಲಯ ಎಂದು ಜ್ಞಾನಭಾರತಿ ಕ್ಯಾಂಪಸ್ ನ್ನು ಘೋಷಿಸಿದ್ದಕ್ಕೆ ವಿದ್ಯಾರ್ಥಿಗಳಿಗೂ ಖುಷಿಯಿದೆ. ಇಲ್ಲಿ ತುಂಬಾ ವಾಹನಗಳು ಓಡಾಡುತ್ತಿರುವುದರಿಂದ ತರಗತಿಯಲ್ಲಿ ಕುಳಿತು ಪಾಠ ಕೇಳಲು, ಲೈಬ್ರೆರಿಯಲ್ಲಿ ಕುಳಿತು ಓದಲು, ಹಾಸ್ಟೆಲ್ ಗಳಲ್ಲಿ ಇರಲು ತೊಂದರೆಯಾಗುತ್ತದೆ. ಈ ಬಗ್ಗೆ ವಿಶ್ವವಿದ್ಯಾಲಯದ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದಿದ್ದೇವೆ.ಕೊನೆಗೂ ವಿಶ್ವವಿದ್ಯಾಲಯ ತೀರ್ಮಾನ ತೆಗೆದುಕೊಂಡಿರುವುದು ಸಂತಸ ತಂದಿದೆ ಎನ್ನುತ್ತಾರೆ ಸ್ನಾತಕೋತ್ತರ ವಿದ್ಯಾರ್ಥಿ ನಾಗೇಶ್.