ನನ್ನನ್ನಾಗಲಿ, ಶ್ರೀನಿವಾಸ ಪ್ರಸಾದ್ ರವರನ್ನಾಗಲಿ ಚುನಾವಣೆಯಲ್ಲಿ ಸೋಲಿಸುವುದು, ಗೆಲ್ಲಿಸುವುದು ಕ್ಷೇತ್ರದ ಮತದಾರರು, ಜನತೆ, ಹಾಗಾಗಿ ಸಿದ್ದರಾಮಯ್ಯನವರನ್ನು ಸೋಲಿಸುವುದೇ ನನ್ನ ಗುರಿ ಎಂದು ಶ್ರೀನಿವಾಸ ಪ್ರಸಾದ್ ರವರು ಹೇಳಿದ್ದರೆ ಅದರಿಂದ ನನಗೆ ಯಾವ ವ್ಯತ್ಯಾಸವೂ ಆಗುವುದಿಲ್ಲ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ತೊರೆದದ್ದು ದುರದೃಷ್ಟಕರ ಎಂದಷ್ಟೇ ನಾನು ಹೇಳಲು ಇಚ್ಛಿಸುತ್ತೇನೆ ಎಂದರು.