ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಬಿಡಿಎ ಕಚೇರಿ ಆವರಣದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮಹಿಳೆಯೊಬ್ಬರು ಕಚೇರಿ ಆವಣರದಲ್ಲೇ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮಹಿಳೆಯೊಬ್ಬರು ಕಚೇರಿ ಆವಣರದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಇಂದು ಮಧ್ಯಾಹ್ನ ಬೆಂಗಳೂರಿನ ಕುಮಾರ ಪಾರ್ಕ್ ನಲ್ಲಿರುವ ಬಿಡಿಎ ಕಚೇರಿಯಲ್ಲಿ ಭೂಸ್ವಾಧೀನ ಅಧಿಕಾರಿ ನೂರು ಜಹಾರ ಖಾನ್ ಅವರ ಕೊಠಡಿ ಎದುರೇ ಮಹಾಲಕ್ಷ್ಮೀಲೇಔಟ್ ನಿವಾಸಿ ಮಂಗಳಾ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಂಗಳಾ ಅವರಿಗೆ ತರ್ತು ಚಿಕಿತ್ಸೆ ನೀಡಲಾಗುತ್ತಿದೆ. ರಿಂಗ್ ರಸ್ತೆಗೆ ಅಂಡರ್ ಪಾಸ್ ನಿರ್ಮಾಣಕ್ಕಾಗಿ ಬಿಡಿಎ ಅಧಿಕಾರಿಗಳು ಮಹಿಳೆಯ ಮನೆ ಸ್ವಾಧೀನ ಮಾಡಿಕೊಂಡಿದ್ದು. ಅದಕ್ಕೆ ಪರಿಹಾರ ನೀಡಿಲ್ಲ. ಪರಿಹಾರಕ್ಕಾಗಿ ಅಲೆದಾಡುತ್ತಿದ್ದ ಮಂಗಳಾಗೆ ಬಿಡಿಎ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com