ಮನೆ ತೆರವುಗೊಳಿಸುವಂತೆ ತಹಸೀಲ್ದಾರ್ ನೀಡಿರುವ ನೋಟಿಸ್ ಕಾನೂನು ಬಾಹಿರವಾಗಿದ್ದು, ಅದನ್ನು ರದ್ದುಪಡಿಸಬೇಕು. ಹಾಗೆಯೇ, ಅರ್ಜಿ ಇತ್ಯರ್ಥವಾಗುವವರೆಗೆ ನೋಟಿಸ್ ಮತ್ತು ತಮ್ಮ ಮನೆಯನ್ನು ಸರ್ಕಾರ ವಶಕ್ಕೆ ಪಡೆಯುವುದಕ್ಕೆ ಹಾಗೂ ನೆಲಸಮಗೊಳಿಸುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂದು ದರ್ಶನ್ ಕೋರ್ಟ್ ಗೆ ಮನವಿ ಮಾಡಿದ್ದರು.