ಕಾರಿಡಾರ್ ಗಳ ವಿಂಗಡಣೆ, ಪ್ರಬೇಧಗಳ ಅಳಿಯುವಿಕೆ ಮತ್ತು ರಸ್ತೆಗಳ ನಿರ್ಮಾಣ ಕುರಿತು ಕೇಂದ್ರ ಸರ್ಕಾರ ಕರಡು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಸಂರಕ್ಷಿತ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಜಾರಿಗೆ ಪರಿಸರ ಸ್ನೇಹಿ ಕ್ರಮಗಳನ್ನು ಜಾರಿಗೆ ತರಲಿದೆ. ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ ಈ ಕುರಿತು ಸಲಹೆ, ಅಭಿಪ್ರಾಯಗಳನ್ನು ನವೆಂಬರ್ 7ರೊಳಗೆ ಕಳುಹಿಸುವಂತೆ ಕೋರಿದೆ.ಇದರಲ್ಲಿ ಕರ್ನಾಟಕದ ಬಂಡೀಪುರ ಅಭಯಾರಣ್ಯ ಕೂಡ ಒಳಗೊಂಡಿದೆ.