ಸಾಂದರ್ಭಿಕ ಚಿತ್ರ
ರಾಜ್ಯ
ಬೆಂಗಳೂರು: ಐರಾವತ ಬಸ್ ಮೇಲೆ ಉರುಳಿ ಬಿದ್ದ ಬೃಹದಾಕಾರದ ಮರ, ಪ್ರಯಾಣಿಕರು ಸೇಫ್
ಐರಾವತ ಬಸ್ ಮೇಲೆ ಬೃಹತ್ ಮರವೊಂದು ಉರುಳಿಬಿದ್ದಿರುವ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ.
ಬೆಂಗಳೂರು: ಐರಾವತ ಬಸ್ ಮೇಲೆ ಬೃಹತ್ ಮರವೊಂದು ಉರುಳಿಬಿದ್ದಿರುವ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ.
ಮಲ್ಲೇಶ್ವರದ ಮಾರ್ಗೋಸಾ ರಸ್ತೆಯಲ್ಲಿ ತೆರಳುತ್ತಿದ್ದ ಐರಾವತ ಬಸ್ ಮೇಲೆ ಬುಡ ಸಮೇತ ಮರ ಧರೆಗುರುಳಿದಿದೆ. ಈ ವೇಳೆ ಬಸ್ ನಲ್ಲಿ 26 ಪ್ರಯಾಣಿಕರಿದ್ದರು ಎನ್ನಲಾಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.
ಬಸ್ ಶಿರಡಿಯಿಂದ ಬೆಂಗಳೂರಿಗೆ ಬರುತ್ತಿತ್ತು ಎನ್ನಲಾಗಿದೆ. ಪೊಲೀಸರು, ಅಗ್ನಿಶಾಮಕ ಅಧಿಕಾರಿಗಳಿಂದ ಮರ ತೆರವುಗೊಳಿಸುವ ಕಾರ್ಯ ನಡೆದಿದ್ದು, ಮಲ್ಲೇಶ್ವರಂ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ