ಬೆಂಗಳೂರು: ಎಲ್ಲೆಲ್ಲೂ ಇಂದು ಮತ್ತು ನಾಳೆ ಗೌರಿ, ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆಯಿಂದಲೇ ದೇವಾಲಯಗಳಲ್ಲಿ ಭಕ್ತರು ಸಾಲುಗಟ್ಟಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ಗೌರಿಗೆ ಸುಮಂಗಲಿಯರು ಬಾಗಿನ ಅರ್ಪಿಸಿ, ಪೂಜೆ ಸಲ್ಲಿಸುತ್ತಿರುವ ದೃಶ್ಯ ಅಲ್ಲಲ್ಲಿ ಕಂಡುಬರುತ್ತಿದೆ. ಮನೆ, ಮನೆಗಳಲ್ಲಿ ರಂಗೋಲಿ ಬಿಡಿಸಿ, ತಳಿರು ತೋರಣ ಕಟ್ಟಿದ್ದಾರೆ. ಗೌರಿ ಮೂರ್ತಿಗೆ ಹೂವಿನ ಅಲಂಕಾರ ಮಾಡಿ ಬಾಗಿನ ಸಿದ್ದಪಡಿಸಿ, ಭಕ್ತಿಯಿಂದ ಪೂಜೆ ಸಲ್ಲಿಸಿದರು.