ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ವೇಳೆ ದೋಣಿ ದುರಂತ; ಸುಮಾರು ಹತ್ತು ಜನರ ಸಾವು

ಶಿವಮೊಗ್ಗದ ತುಂಗಭದ್ರ ನದಿಯಲ್ಲಿ ಗಣೇಶ ವಿಸರ್ಜನೆ ವೇಳೆ ದೋಣಿ ಮುಳುಗಿ ಹತ್ತಕ್ಕೂ ಹೆಚ್ಚು ಮಂದಿ ನೀರು ಪಾಲಾಗಿದ್ದಾರೆ ಎಂದು ಶಂಕಿಸಲಾಗಿದೆ...
ಮೃತರ ದೇಹಕ್ಕಾಗಿ ಶೋಧ ಕಾರ್ಯ ನಡೆದಿದೆ.
ಮೃತರ ದೇಹಕ್ಕಾಗಿ ಶೋಧ ಕಾರ್ಯ ನಡೆದಿದೆ.
ಶಿವಮೊಗ್ಗ: ಶಿವಮೊಗ್ಗದ ತುಂಗಭದ್ರ ನದಿಯಲ್ಲಿ ಗಣೇಶ ವಿಸರ್ಜನೆ ವೇಳೆ ದೋಣಿ ಮುಳುಗಿ ಹತ್ತಕ್ಕೂ ಹೆಚ್ಚು ಮಂದಿ ನೀರು ಪಾಲಾಗಿದ್ದಾರೆ ಎಂದು ಶಂಕಿಸಲಾಗಿದೆ. 
ಶಿವಮೊಗ್ಗ ಜಿಲ್ಲೆಯ ಹಾಡೋನಹಳ್ಳಿಯಲ್ಲಿನ ತುಂಗಭದ್ರ ನದಿಯಲ್ಲಿ ಗಣಪತಿ ಮೂರ್ತಿಯನ್ನು ವಿಸರ್ಜಿಸಲು ನದಿಯ ಮಧ್ಯಭಾಗಕ್ಕೆ ತೆರಳಿದ್ದಾರೆ. ಈ ವೇಳೆ ಮೊದಲು ಗೌರಿಯನ್ನು ವಿಸರ್ಜನೆ ಮಾಡಿದ್ದ ಭಕ್ತರು ನಂತರ 3 ಅಡಿ ಎತ್ತರದ ಗಣೇಶ ಮೂರ್ತಿಯನ್ನು ವಿಸರ್ಜಿಸುವ ವೇಳೆ ಈ ದುರಂತ ಸಂಭವಿಸಿದೆ. 
ಗಣೇಶ ಮೂರ್ತಿ ವಿಸರ್ಜನೆಗಾಗಿ ಪುಟ್ಟ ದೋಣಿಯಲ್ಲಿ 20ಕ್ಕೂ ಹೆಚ್ಚು ಜನರು ಹೋಗಿದ್ದರಿಂದ ದೋಣಿ ಮುಳುಗಿದ್ದು ಈ ವೇಳೆ 10ಕ್ಕೂ ಹೆಚ್ಚು ಜನರು ನೀರುಪಾಲಾಗಿದ್ದಾರೆ ಎಂದು ಶಂಕಿಸಲಾಗಿದೆ. 20ಕ್ಕೂ ಹೆಚ್ಚು ಜನರ ಪೈಕಿ 9 ಮಂದಿ ಈಜಿ ದಡ ಸೇರಿದ್ದು ಇನ್ನುಳಿದವರಿಗಾಗಿ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರು, ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com