ಗಣೇಶ ಮೂರ್ತಿ ವಿಸರ್ಜನೆಗಾಗಿ ಪುಟ್ಟ ದೋಣಿಯಲ್ಲಿ 20ಕ್ಕೂ ಹೆಚ್ಚು ಜನರು ಹೋಗಿದ್ದರಿಂದ ದೋಣಿ ಮುಳುಗಿದ್ದು ಈ ವೇಳೆ 10ಕ್ಕೂ ಹೆಚ್ಚು ಜನರು ನೀರುಪಾಲಾಗಿದ್ದಾರೆ ಎಂದು ಶಂಕಿಸಲಾಗಿದೆ. 20ಕ್ಕೂ ಹೆಚ್ಚು ಜನರ ಪೈಕಿ 9 ಮಂದಿ ಈಜಿ ದಡ ಸೇರಿದ್ದು ಇನ್ನುಳಿದವರಿಗಾಗಿ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರು, ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.