ಸಂಸತ್ನಲ್ಲಿ ಅಂಗೀಕಾರವಾಗಿರುವ ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ 17 ರಾಜ್ಯಗಳು ಈಗಾಗಲೇ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಅಂಕಿತ ಹಾಕಿರುವುದರಿಂದ ಈ ಮಸೂದೆಯು ಕಾನೂನು ಆಗಿದೆ. ಈ ಸಂದರ್ಭದಲ್ಲಿ ರಾಜ್ಯ ವಿಧಾನ ಮಂಡಲದ ಅಧಿವೇಶನದಲ್ಲಿ ಈ ಕಾನೂನಿಗೆ ಅನುಮೋದನೆ ನೀಡುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸೆಪ್ಟೆಂಬರ್ 14 ರಂದು ಕರೆದಿರುವ ರಾಜ್ಯ ವಿಧಾನ ಮಂಡಲದ ಅಧಿವೇಶನವನ್ನು ಮುಂದೂಡಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಸಂಪುಟ ತೀರ್ಮಾನಿಸಿದೆ ಎಂದು ಹೇಳಿದರು.