ಪ್ರತಿಭಟನಾಕಾರರು ರಾಜ್ಯಾದ್ಯಂತ ತಮಿಳುನಾಡು ನೋಂದಣಿಯ ವಾಹನಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಪ್ರತಿಭಟನಾಕಾರರು ಪ್ರತಿಯೊಬ್ಬ ಕಚೇರಿಯನ್ನು ಮುಚ್ಚಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಹಿಂಸಾಚಾರ ಭುಗಿಲೆಳುತ್ತಿದ್ದಂತೆ ಕೆಲವು ಭಾಗಗಳಿಗೆ ಬಿಎಂಟಿಸಿ ಬಸ್ ಸೇವೆ ಸ್ಧಗಿತಗೊಂಡಿರುವುದರಿಂದ ಮೆಜೆಸ್ಟಿಕ್ ನಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ.