ಕಾವೇರಿ ವಿಷಯದಲ್ಲಿ ಬಂಗಾರಪ್ಪನಂತೆ ಗಂಡೆದೆ ತೋರಿ: ಸಿದ್ದರಾಮಯ್ಯಗೆ ಪೂಜಾರಿ ತಾಕೀತು

ಕಾವೇರಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರಂತೆ ಗಂಡೆದೆ ತೋರಬೇಕು ಎಂದು ಮಾಜಿ ಕೇಂದ್ರ...
ಜನಾರ್ದನ ಪೂಜಾರಿ
ಜನಾರ್ದನ ಪೂಜಾರಿ
Updated on
ಮಂಗಳೂರು: ಕಾವೇರಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರಂತೆ ಗಂಡೆದೆ ತೋರಬೇಕು ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ತಾಕೀತು ಮಾಡಿದ್ದಾರೆ. 
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ನಡದೆ ಸರ್ವಪಕ್ಷ ಸಭೆಯ ನಿರ್ಧಾರವನ್ನು ಪಾಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬದ್ಧತೆ ತೋರಿಸಿಲ್ಲ 24 ಗಂಟೆಯೊಳಗೆ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ತಾಕೀತು ಮಾಡಿದರು. 
ಕಾವೇರಿ ವಿವಾದ ವಿಚಾರದಲ್ಲಿ ರಾಜ್ಯದ ಸಂಸದರು ರಾಜಿನಾಮೆ ನೀಡಲಿ. ರಾಜ್ಯಗಳ ಮಧ್ಯೆ ಸಂಘರ್ಷ ಸರಿಯಲ್ಲ. ಪ್ರಧಾನಿಯವರು ಮೂರು ರಾಜ್ಯಗಳ ಸಿಎಂಗಳ ಸಭೆ ಕರೆಯಲಿ ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com