ಕಾವೇರಿ ಗಲಾಟೆ: ಮೈಸೂರಿನ ಬಂಡಿಪಾಳ್ಯ, ನಂಜನಗೂಡು ರಸ್ತೆಯಲ್ಲಿ ನಿಷೇಧಾಜ್ಞೆ

ಸುಪ್ರೀಂ ಕೋರ್ಟ್ ಗೆ ಕರ್ನಾಟಕ ಸಲ್ಲಿಸಿದ್ದ ಮದ್ಯಂತರ ಅರ್ಜಿ ವಿಚಾರಣೆಯಲ್ಲೂ ಹಿನ್ನಡೆಯಾದ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಪ್ರತಿಭಟನಾಕಾರರ ಆಕ್ರೋಶ ಭುಗಿಲೆದಿದ್ದು...
ಕಾವೇರಿ ಪ್ರತಿಭಟನೆ
ಕಾವೇರಿ ಪ್ರತಿಭಟನೆ
Updated on
ಮೈಸೂರು: ಸುಪ್ರೀಂ ಕೋರ್ಟ್ ಗೆ ಕರ್ನಾಟಕ ಸಲ್ಲಿಸಿದ್ದ ಮದ್ಯಂತರ ಅರ್ಜಿ ವಿಚಾರಣೆಯಲ್ಲೂ ಹಿನ್ನಡೆಯಾದ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಪ್ರತಿಭಟನಾಕಾರರ ಆಕ್ರೋಶ ಭುಗಿಲೆದಿದ್ದು ಮೈಸೂರಿನ ಕೆಲ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮೈಸೂರಿನ ನಂಜನಗೂಡು ರಸ್ತೆಯಲ್ಲಿರುವ ಬಂಡಿಪಾಳ್ಯ ಮಾರುಕಟ್ಟೆಯಲ್ಲಿ ತಮಿಳುನಾಡು ನೋಂದಣಿಯ ಲಾರಿಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ನಂಜನಗೂಡು ರಸ್ತೆ ಹಾಗೂ ಬಂಡಿಪಾಳ್ಯದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಮೈಸೂರು ಉಪವಿಭಾಗಾಧಿಕಾರಿ ಸಿಎಲ್ ಆನಂದ್ ಆದೇಶ ಜಾರಿಗೊಳಿಸಿದ್ದಾರೆ.
ಬಂಡಿಪಾಳ್ಯದ ಮಾರುಕಟ್ಟೆಯಲ್ಲಿ ತಮಿಳುನಾಡಿನ ಲಾರಿಗಳು ನಿಂತಿರುವುದರಿಂದ ಪ್ರತಿಭಟನಾಕಾರರು ಮಾರುಕಟ್ಟೆಗೆ ನುಗ್ಗಿ ಲಾರಿಗೆ ಬೆಂಕಿ ಹಚ್ಚಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com