ಕಾವೇರಿ ಗಲಾಟೆ: ಮೈಸೂರಿನ ಬಂಡಿಪಾಳ್ಯ, ನಂಜನಗೂಡು ರಸ್ತೆಯಲ್ಲಿ ನಿಷೇಧಾಜ್ಞೆ

ಸುಪ್ರೀಂ ಕೋರ್ಟ್ ಗೆ ಕರ್ನಾಟಕ ಸಲ್ಲಿಸಿದ್ದ ಮದ್ಯಂತರ ಅರ್ಜಿ ವಿಚಾರಣೆಯಲ್ಲೂ ಹಿನ್ನಡೆಯಾದ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಪ್ರತಿಭಟನಾಕಾರರ ಆಕ್ರೋಶ ಭುಗಿಲೆದಿದ್ದು...
ಕಾವೇರಿ ಪ್ರತಿಭಟನೆ
ಕಾವೇರಿ ಪ್ರತಿಭಟನೆ
ಮೈಸೂರು: ಸುಪ್ರೀಂ ಕೋರ್ಟ್ ಗೆ ಕರ್ನಾಟಕ ಸಲ್ಲಿಸಿದ್ದ ಮದ್ಯಂತರ ಅರ್ಜಿ ವಿಚಾರಣೆಯಲ್ಲೂ ಹಿನ್ನಡೆಯಾದ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಪ್ರತಿಭಟನಾಕಾರರ ಆಕ್ರೋಶ ಭುಗಿಲೆದಿದ್ದು ಮೈಸೂರಿನ ಕೆಲ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮೈಸೂರಿನ ನಂಜನಗೂಡು ರಸ್ತೆಯಲ್ಲಿರುವ ಬಂಡಿಪಾಳ್ಯ ಮಾರುಕಟ್ಟೆಯಲ್ಲಿ ತಮಿಳುನಾಡು ನೋಂದಣಿಯ ಲಾರಿಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ನಂಜನಗೂಡು ರಸ್ತೆ ಹಾಗೂ ಬಂಡಿಪಾಳ್ಯದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಮೈಸೂರು ಉಪವಿಭಾಗಾಧಿಕಾರಿ ಸಿಎಲ್ ಆನಂದ್ ಆದೇಶ ಜಾರಿಗೊಳಿಸಿದ್ದಾರೆ.
ಬಂಡಿಪಾಳ್ಯದ ಮಾರುಕಟ್ಟೆಯಲ್ಲಿ ತಮಿಳುನಾಡಿನ ಲಾರಿಗಳು ನಿಂತಿರುವುದರಿಂದ ಪ್ರತಿಭಟನಾಕಾರರು ಮಾರುಕಟ್ಟೆಗೆ ನುಗ್ಗಿ ಲಾರಿಗೆ ಬೆಂಕಿ ಹಚ್ಚಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com