ಹಲವೆಡೆ ಬಸ್ ಸಂಚಾರ ಆರಂಭ: ನಾಳೆ ಬಂದ್ ಗೆ ಕರೆ ನೀಡಿಲ್ಲ

ಕಾವೇರಿ ಹೋರಾಟ ಹಿನ್ನೆಲೆಯಲ್ಲಿ ನಿನ್ನೆ ಸಂಜೆಯಿಂದ ಸ್ಥಗಿತಗೊಂಡಿದ್ದ ಬಸ್ ಸಂಚಾರ ಪುನರ್ ಆರಂಭವಾಗಿದೆ. ..
ಕೆಲವೆಡೆ ಬಸ್ ಸಂಚಾರ ಆರಂಭ
ಕೆಲವೆಡೆ ಬಸ್ ಸಂಚಾರ ಆರಂಭ

ಬೆಂಗಳೂರು: ಕಾವೇರಿ ಹೋರಾಟ ಹಿನ್ನೆಲೆಯಲ್ಲಿ ನಿನ್ನೆ ಸಂಜೆಯಿಂದ ಸ್ಥಗಿತಗೊಂಡಿದ್ದ ಬಸ್ ಸಂಚಾರ ಪುನರ್ ಆರಂಭವಾಗಿದೆ.

ಸ್ಯಾಟ್ ಲೈಟ್ ಬಸ್ ನಿಲ್ದಾಣದಿಂದ ಬಸ್ ಸಂಚಾರ ಆರಂಭವಾಗಿದ್ದು, ಮೈಸೂರು, ಕೊಳ್ಳೇಗಾಲ ಮತ್ತು ಗುಂಡ್ಲುಪೇಟೆ ಮಾರ್ಗದ ಬಸ್ ಸಂಚಾರ ಆರಂಭಗೊಂಡಿದೆ. ಕೆಲವೆಡೆ ಒಂದೊಂದೆ ಬಿಎಂಟಿಸಿ ಬಸ್ ಸಂಚಾರ ಕೂಡ ಆರಂಭವಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದರೇ ಎಲ್ಲಾ ಜಿಲ್ಲೆಗಳಿಗೂ ನಿಧಾನವಾಗಿ ಬಸ್ ಸಂಚಾರ ಆರಂಭಿಸುವುದಾಗಿ ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ ಪೊಲೀಸ್ ಗುಂಡೇಟಿಗೆ ಯುವಕ ಉಮೇಶ್ ಬಲಿಯಾಗಿರುವ ಘಟನೆಯಿಂದಾಗಿ ಹೆಗ್ಗನಹಳ್ಳಿ ಸೇರಿದಂತೆ ಸುತ್ತಮುತ್ತನಲಿನ ಪ್ರದೇಶ ಬೂದಿ ಮುಚ್ಚಿದ ಕೆಂಡದಂತಿದ್ದು, ಅಘೋಷಿತ ಬಂದ್ ವಾತಾವರಣ ಸೃಷ್ಟಿಯಾಗಿದೆ.

ಕಾವೇರಿ ಹೋರಾಟದ ಹಿನ್ನೆಲೆಯಲ್ಲಿ ಯಾವುದೇ ಸಂಘಟನೆಗಳು ಬುಧವಾರ ಬೆಂಗಳೂರು ಬಂದ್ ಗೆ ಕರೆ ಕೊಟ್ಟಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com