ಇನ್ನು ನಿಷೇಧಾಜ್ಞೆ ಹಿನ್ನಲೆಯಲ್ಲಿ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಧಗಿತಗೊಳಿಸಲಾಗಿತ್ತು. ಇಂದು ಯಾವುದೇ ಅಹಿತಕರ ಘಟನೆಗಳು ವರದಿಯಾಗದ ಹಿನ್ನಲೆಯಲ್ಲಿ ಸಂಜೆ 5 ಗಂಟೆ ನಂತರ ಬಿಎಂಟಿಸಿ ಬಸ್ ಸಂಚಾರ ಆರಂಭಿಸಲಾಗಿದೆ. ಈ ಮಧ್ಯೆ ಕೆಎಸ್ಆರ್ಟಿಸಿ ಬಸ್ ಸೇವೆ ಸಹ ಆರಂಭಗೊಂಡಿದ್ದು, ತಮಿಳುನಾಡು ಹೊರತು ಪಡಿಸಿ ಕೆಎಸ್ಆರ್ಟಿಸಿ ಬಸ್ ಗಳು ಸಂಚರಿಸುತ್ತೀವೆ. ಮಂಡ್ಯದಿಂದ ಮೂರು ಕೆಎಸ್ಆರ್ಟಿಸಿ ಬಸ್ ಗಳು ಬೆಂಗಳೂರಿನತ್ತ ಹೊರಟು ನಿಂತಿವೆ.