ಬೆಂಗಳೂರು: ನಿಂತಿದ್ದ ಲಾರಿಗೆ ಕ್ವಾಲಿಸ್ ಡಿಕ್ಕಿ, ಒಂದೇ ಕುಟುಂಬದ ನಾಲ್ವರ ದುರ್ಮರಣ

ನಿಂತಿದ್ದ ಲಾರಿಗೆ ಕ್ವಾಲಿಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತ ಪಟ್ಟಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ನಿಂತಿದ್ದ ಲಾರಿಗೆ ಕ್ವಾಲಿಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತ ಪಟ್ಟಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಭೀಮಕನಹಳ್ಳಿ ಗೇಟ್ ಬಳಿ ಸಂಭವಿಸಿದೆ.

ಮೃತರನ್ನು ಕುಮಾರ (36), ರಾಜ ಲಕ್ಷ್ಮೀ (31), ರಂಜಿತಾ (12) ಹಾಗೂ ಬಾಲಾಜಿ (8) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಹೊಸಕೋಟೆಯವರಾಗಿದ್ದು, ಮದುವೆ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಘಟನೆ ನಡೆದಿದೆ.

ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಸಂಬಂಧ ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com